ಭಾರತದಲ್ಲಿ ಕೊರೊನಾ ಕ್ರೌರ್ಯ : 24 ಗಂಟೆಯಲ್ಲಿ 98,000 ಪಾಸಿಟಿವ್, 1,132 ಡೆತ್..!
ನವದೆಹಲಿ/ಮುಂಬೈ, ಸೆ.17- ದೇಶದಲ್ಲಿ ಕಿಲ್ಲರ್ ಕೊರೊನಾ ದಾಳಿಯ ಎರಡನೇ ಅಲೆ ಆತಂಕದ ನಡುವೆಯೇ, ವೈರಾಣು ಸೋಂಕು ಮತ್ತುಸಾವು ಪ್ರಕರಣಗಳಲ್ಲಿ ನಿರಂತರ ಹೆಚ್ಚಳ ಕಂಡುಬರುತ್ತಿರುವುದು ಭರತ ಖಂಡಕ್ಕೆ ಗಂಡಾಂತರಕಾರಿಯಾಗಿ ಪರಿಣಮಿಸಿದೆ. ಪಾಸಿಟಿವ್ ಪ್ರಕರಣದಲ್ಲಿ ಮತ್ತೆ ಹೊಸ ದಾಖಲೆ ನಿರ್ಮಾಣವಾಗಿದ್ದು, ಒಂದೇ ದಿನ ಸುಮಾರು 98,000 ಮಂದಿಗೆ ಸಾಂಕ್ರಾಮಿಕರೋಗ ಕಾಣಿಸಿಕೊಂಡಿದೆ.
ಕೋವಿಡ್-19 ಹಾವಳಿ ತೀವ್ರಗೊಳ್ಳುತ್ತಿದ್ದು, ಕೇವಲ 11 ದಿನಗಳಲ್ಲಿ 10 ಲಕ್ಷಕ್ಕೂ ಹೆಚ್ಚು ಮಂದಿಗೆ ವೈರಸ್ರೋಗತಗುಲಿದೆ. ಜಗತ್ತಿನ ಕೋವಿಡ್ ಹಾವಳಿ ಪೀಡಿತರಾಷ್ಟ್ರಗಳಲ್ಲಿಎರಡನೇ ಸ್ಥಾನದಲ್ಲಿರುವ ಭಾರತದಲ್ಲಿ ಹೆಮ್ಮಾರಿಯ ಆರ್ಭಟ ಏರುಗತಿಯಲ್ಲಿಯೇ ಇದೆ. ಸೋಂಕು ಮತ್ತು ಸಾವಿನ ಏರಿಳಿತವು ಭಾರತೀಯರಲ್ಲಿಆತಂಕಕ್ಕೆ ಕಾರಣವಾಗಿದೆ.
ಇಂದು ಬೆಳಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 97,894 (ಮಂಗಳವಾರ 90,123 ಮತ್ತು ಸೋಮವಾರ 83,809) ಸೋಂಕು ಪ್ರಕರಣಗಳು ದಾಖಲಾಗಿದೆ. ಮೊನ್ನೆಗೆ ಹೋಲಿಸಿದಲ್ಲಿ ಒಂದೇ ದಿನ 7,000ಕ್ಕೂ ಹೆಚ್ಚು ಕೇಸ್ಗಳು ವರದಿಯಾಗಿವೆ. ದೇಶಲ್ಲೀಗ ಸೋಂಕಿತರ ಸಂಖ್ಯೆ52 ಲಕ್ಷ ಸನಿಹದಲ್ಲಿದೆ.
ಒಂದೇ ದಿನ 1,132 (ಮಂಗಳವಾರ 1,290 ಮತ್ತು ಸೋಮವಾರ 1,054) ರೋಗಿಗಳನ್ನು ಕೊರೊನಾ ಮಹಾಮಾರಿ ಬಲಿ ತೆಗೆದುಕೊಂಡಿದೆ. ಸತತ 12ನೇ ದಿನ 1,000ಕ್ಕೂ ಹೆಚ್ಚು ಸಾವು ಸಂಭವಿಸಿದೆ. ಇದರೊಂದಿಗೆದೇಶದಲ್ಲಿ ಮೃತರ ಸಂಖ್ಯೆ83,200ದಾಟಿದೆ.
ಭಾರತದಲ್ಲಿ17ದಿನಗಳಿಂದಲೂ ಸರಾಸರಿ 90,000 ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ನಿನ್ನೆ97,894 ಸೋಂಕು ಪ್ರಕರಣಗಳೊಂದಿಗೆ. ಒಟ್ಟು ರೋಗಿಗಳ ಸಂಖ್ಯೆ 51,18,253ಕ್ಕೇರಿದ್ದು, ನಾಳೆ ವೇಳೆಗೆ52 ಲಕ್ಷ ಮೀರುವ ಸಾಧ್ಯತೆಇದೆ. ಆಗಸ್ಟ್ 7ರಂದು 20 ಲಕ್ಷಇದ್ದ ಪಾಸಿಟಿವ್ ಪ್ರಕರಣಗಳು ಆ.23ಕ್ಕೆ 30 ಲಕ್ಷಕ್ಕೇರಿತ್ತು. ನಂತರ ಸೆಪ್ಟೆಂಬರ್ 5ರಂದು 40 ಲಕ್ಷದಾಟಿತ್ತು. ಕೇವಲ 11 ದಿನಗಳಲ್ಲಿ ಅಂದರೆ ಸೆ.15ರಂದು 50 ಲಕ್ಷದಾಟಿದೆ.
ಪರಿಸ್ಥಿತಿ ಇದೇರೀತಿ ಮುಂದುವರಿದರೆಅಕ್ಟೋಬರ್ ವೇಳೆಗೆ ದೇಶದಲ್ಲಿ 80 ಲಕ್ಷಕ್ಕೂಅಧಿಕ ಸೋಂಕು ಪ್ರಕರಣಗಳು ದಾಖಲಾಗುವಆತಂಕವಿದೆ. ಇದರ ನಡುವೆಯೂ ಚೇತರಿಕೆ ಪ್ರಮಾಣದಲ್ಲಿ ಶೇ.78.65ರಷ್ಟು ವೃದ್ದಿ ಕಂಡುಬಂದಿದ್ದು, ಈವರೆಗೆ ದೇಶದಲ್ಲಿ ಸುಮಾರು 6.05 ಕೋಟಿ ಜನರ ಸ್ಯಾಂಪಲ್ಗಳನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.
ದೇಶದಲ್ಲಿ ಒಂದೆಡೆ ಚೇತರಿಕೆ ಪ್ರಮಾಣದಲ್ಲಿ ವೃದ್ದಿ ಕಂಡುಬಂದಿದ್ದರೂ, ಮತ್ತೊಂದೆಡೆ 10.10ಲಕ್ಷಸಕ್ರಿಯ ಪ್ರಕರಣಗಳ ಹೆಚ್ಚಳವೂ ಸಹ ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆಯೂ ಸುಮಾರು 40.25ಲಕ್ಷ ಮಂದಿ ಹೆಮ್ಮಾರಿಯ ಬಿಗಿ ಹಿಡಿತದಿಂದ ಪಾರಾಗಿದ್ದಾರೆ. ದೇಶದಲ್ಲಿ ಈಗ 10,09,976 ಆಕ್ಟಿವ್ ಕೇಸ್ಗಳಿವೆ. ಸಕ್ರಿಯ ಪ್ರಕರಣಗಳಿಗೆ ಹೋಲಿಸಿದಲ್ಲಿ, ರಿಕವರಿರೇಟ್ನಲ್ಲಿ ನಾಲ್ಕು ಪಟ್ಟುಗಳಿಗಿಂತಲೂ ಅಧಿಕ ಹೆಚ್ಚಳ ಕಂಡು ಬಂದಿರುವುದು ಸಮಾಧಾನಕರ ಸಂಗತಿ.
ಇಂದು ಬೆಳಗ್ಗೆಯಿಂದಲೂ ದೇಶದ ಬಹುತೇಕ ರಾಜ್ಯಗಳಲ್ಲಿ ಹೊಸ ಸೋಂಕು ಮತ್ತು ಸಾವಿನ ಪ್ರಕರಣಗಳು ವರದಿಯಾಗುತ್ತಲೇ ಇವೆÉ. ಮಹಾರಾಷ್ಟ್ರರಾಜ್ಯವು ಸೋಂಕು ಮತ್ತು ಸಾವಿನ ಸಂಖ್ಯೆಯಲ್ಲಿ ಅಗ್ರಸ್ಥಾನದಲ್ಲೇ ಮುಂದುವರಿದಿದೆ.
ದೇಶದಾದ್ಯಂತ ನಿನ್ನೆಒಂದೇ ದಿನ 11.36ಲಕ್ಷಕ್ಕೂ ಹೆಚ್ಚುಜನರ ಸ್ಯಾಂಪಲ್ಗಳನ್ನು ಪರೀಕ್ಷಿಸಲಾಗಿದ್ದು, ಈವರೆಗೆ 6.05ಕೋಟಿಗೂ ಅಧಿಕ ಜನರ ಮಾದರಿಗಳನ್ನು ಪರೀಕ್ಷೆಗೆ ಒಳಪಡಿಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್) ತಿಳಿಸಿದೆ.