ಚುನಾವಣಾ ಪ್ರಚಾರದ ವೇಳೆ ಎಐಎಡಿಎಂಕೆ ನಾಯಕ ಮುಹಮ್ಮದ್ ಜಾನ್ ಹೃದಯಾಘಾತದಿಂದ ನಿಧನ...!!!!
ಚೆನ್ನೈ : ವಿಧಾನಸಭಾ ಚುನಾವಣೆಯ ಪ್ರಚಾರದ ವೇಳೆ ಅಣ್ಣಾಡಿಎಂಕೆ ರಾಜ್ಯಸಭಾ ಸದಸ್ಯ ಎ. ಮುಹಮ್ಮದ್ ಜಾನ್ ಹೃದಯಾಘಾತದಿಂದ ನಿಧನರಾಗಿದ್ದಾರೆ.
72 ವರ್ಷದ ಅವರು ವೆಲ್ಲೂರು ಜಿಲ್ಲೆಯ ರಾನ್ನಿಪೇಟ ವಾಲಾಜಾ ಸಮೀಪ ಚುನಾವಣಾ ಪ್ರಚಾರ ನಡೆಸುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡಾಗ ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
2011ರಲ್ಲಿ ರಾನ್ನಿಪೇಟ ವಿಧಾನಸಭಾ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದ ಅವರು ಜಯಲಲಿತಾ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭ ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಸಚಿವರಾಗಿದ್ದರು. ನಂತರ ತಮಿಳುನಾಡಿನ ವಕ್ಫ್ ಮಂಡಳಿಯ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ.
-
ಉರ್ದು ಪತ್ರಿಕೆಯ ವರದಿಗಾರನ ಮೇಲೆ ಹಲ್ಲೆ ಪ್ರಕರಣ:ವಿಧಾನಸಭೆಯಲ್ಲಿ ಪ್ರತಿಧ್ವನಿ,ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ | ಜನತಾ ಸುದ್ದಿ
-
2022ರ ಜನವರಿ ಬಳಿಕ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾಗಲಿರುವ ಮುಹಮ್ಮದ್ ನಲಪಾಡ್ | ಜನತಾ ಸುದ್ದಿ
Stay Connected
Get Newsletter
Subscribe to our newsletter to get latest news, popular news and exclusive updates.